ADVERTISEMENT

ಗಂಗೂಲಿಗೆ ಬಿಜೆಪಿ ಗಾಳ;ನಿರ್ಧಾರ ಇನ್ನೂ ಬಾಕಿ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2013, 14:26 IST
Last Updated 14 ಡಿಸೆಂಬರ್ 2013, 14:26 IST

ಕೋಲ್ಕತ್ತ (ಪಿಟಿಐ): ಭಾರತೀಯ ಕ್ರಿಕೆಟ್‌ ತಂಡ ಮಾಜಿ ನಾಯಕ ಸೌರವ್‌ ಗಂಗೂಲಿ ಅವರಿಗೆ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಭಾರತೀಯ ಜನತಾ ಪಕ್ಷ ಪ್ರಸ್ತಾವ ಮುಂದಿಟ್ಟಿದೆ.

‘ನವೆಂಬರ್‌ತಿಂಗಳ ಮಧ್ಯಭಾಗದಲ್ಲಿ  ನವದೆಹಲಿಯಲ್ಲಿ ಗಂಗೂಲಿ ಅವರೊಂದಿಗೆ ಪಕ್ಷ ಮುಖಂಡ ವರುಣ್‌ ಗಾಂಧಿ ಅವರು ಸಹಜವಾಗಿ ಈ ಬಗ್ಗೆ ಚರ್ಚಿಸಿದ್ದರು ’ಎಂದು ಪಶ್ವಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ ರಾಹುಲ್‌ ಸಿನ್ಹಾ ತಿಳಿಸಿದ್ದಾರೆ.

‘ಅವರು (ವರುಣ್) ಆಹ್ವಾನ ನೀಡಿದ್ದಾರೆ. ಆದರೆ ಗಂಗೂಲಿ ಅವರು ಪ್ರಸ್ತಾವದ ತಮ್ಮ ನಿರ್ಧಾರವನ್ನು ಸ್ಪಷ್ಟ ಪಡಿಸಿಲ್ಲ. ವಿಚಾರ ಮಾಡಿ ದ ಬಳಿಕ ಚುನಾವಣೆಯಲ್ಲಿ ಸ್ಪರ್ಧಿಸಬೇಕೆ ಅಥವಾ ಬೇಡವೇ ಎಂಬ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ’ ಎಂದು ಪಕ್ಷ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರೂ ಆಗಿರು ಸಿನ್ಹಾ ತಿಳಿಸಿದ್ದಾರೆ.

ADVERTISEMENT

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ವರುಣ್‌ ಅವರು ಪಶ್ಚಿಮ ಬಂಗಾಳ ರಾಜ್ಯ ಉಸ್ತುವಾರಿಯೂ ಹೌದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.