ನವದೆಹಲಿ (ಪಿಟಿಐ): ಮಾಜಿ ಗಗನಸಖಿ ಗೀತಿಕಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಪೊಲೀಸರ ಎದುರು ಶರಣಾಗಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಹರಿಯಾಣಾದ ಮಾಜಿ ಸಚಿವ ಗೋಪಾಲ್ ಗೋಯಲ್ ಕಾಂಡಾ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ದೆಹಲಿ ಪೊಲೀಸರು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಕಾಂಡಾ ಅವರು ಸಹಕರಿಸುತ್ತಿಲ್ಲ. ಇದರಿಂದಾಗಿ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಯೋಚಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. , ಈ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಪೊಲೀಸರಿಗೆ ಸಹಕರಿಸುತ್ತಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. , ಪ್ರಕರಣದ ವಿಚಾರಣೆಗೆ ಅವರು ಸಹಕರಿಸದಿದ್ದಾಗ , ಅವಶ್ಯವಿದ್ದಲ್ಲಿ ಅದನ್ನೂ ಕೂಡ ನಾವು ಮಾಡುತ್ತೇವೆ. ಜತೆಗೆ ತನಿಖೆಗೆ ಅವಶ್ಯವಿರುವ ಸ್ಥಳಗಳಿಗೂ ಅವರನ್ನು ಕರೆದುಕೊಂಡು ಹೋಗುತ್ತೇವೆ~ ಎಂದು ಹಿರಿಯ ಪೊಲೀಸ್ ಅಧಿಕಾರಿ ಡಿಸಿಪಿ ಪಿ. ಕರುಣಾಕರನ್ ಅವರು ತಿಳಿಸಿದ್ದಾರೆ.
ಗೀತಿಕಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಕಾಂಡಾ ಅವರು ತಿರಸ್ಕರಿಸಿದ್ದು
ಕಾಂಡಾ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸುತ್ತೀರಾ ಎಂದು ಕೇಳಿದಾಗ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.