
ಪ್ರಜಾವಾಣಿ ವಾರ್ತೆಲಖನೌ (ಪಿಟಿಐ): ಉತ್ತರ ಪ್ರದೇಶದ ಮಾವೊ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ.
ಪೊಲೀಸರು ಸ್ಥಳೀಯ ದುಷ್ಕರ್ಮಿಗಳನ್ನು ಬೆನ್ನಟ್ಟಿದಾಗ ಅವರು ಮನೆಯೊಂದರ ಒಳಗೆ ಸೇರಿಕೊಂಡರು. ಈ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಕೊತ್ವಾಲಿಯ ಸಬ್ ಇನ್ಸ್ಪೆಕ್ಟರ್ ಗೋವಿಂದ್ ಸಿಂಗ್ ಮತ್ತು ದುಷ್ಕರ್ಮಿಗಳು ಒತ್ತೆ ಇರಿಸಿಕೊಂಡಿದ್ದ ಮನೆಯವರಲ್ಲಿ ಒಬ್ಬರು ಸಾವಿಗೀಡಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.