ADVERTISEMENT

ಗುತ್ತಿಗೆದಾರರಿಂದ ಅಧಿಕಾರಿ ಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2011, 19:30 IST
Last Updated 19 ಅಕ್ಟೋಬರ್ 2011, 19:30 IST

ಬಾಂಡ/ ಲಖನೌ (ಪಿಟಿಐ): ಗುತ್ತಿಗೆದಾರರಿಬ್ಬರು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರನ್ನು ಅವರ ನಿವಾಸದಲ್ಲೇ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಬಾಂಡ ನಗರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

ಜಿ.ಪಂ ಹೆಚ್ಚುವರಿ ಸಿಇಒ ಆಗಿದ್ದ ಆನಂದ್ ಸಿಂಗ್ ಚೌಹಾಣ್ ಕೊಲೆಯಾದವರು. ಭೇಟಿಯಾಗಬೇಕು ಎಂದು ಮನೆಗೆ ಬಂದ ಗುತ್ತಿಗೆದಾರರು ನಂತರ ಅವರತ್ತ ಗುಂಡು ಹಾರಿಸಿದರು. ಈ ವೇಳೆ ಚೌಹಾಣರ ಚಾಲಕ ಹಾಗೂ ಮತ್ತೊಬ್ಬರು ಮನೆಯ ಅಡುಗೆ ಕೋಣೆಯಲ್ಲಿದ್ದರು ಎಂದು ಗೃಹ ಇಲಾಖೆ ತಿಳಿಸಿದೆ.

ಚಾಲಕ ಮೊಹಮ್ಮದ್ ಹನೀಫ್ ನೀಡಿದ ದೂರಿನ ಮೇರೆಗೆ ಇಬ್ಬರು ಗುತ್ತಿಗೆದಾರರ ವಿರುದ್ದ ಎಫ್‌ಐಆರ್ (ಪ್ರಥಮ ವರ್ತಮಾನ ವರದಿ) ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.