ADVERTISEMENT

ಗೋಪ್ಯ ವರದಿ:ಸುಪ್ರೀಂಗೆ ಟಾಟಾ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2012, 19:30 IST
Last Updated 2 ಫೆಬ್ರುವರಿ 2012, 19:30 IST

ನವದೆಹಲಿ (ಐಎಎನ್‌ಎಸ್): ಕಾರ್ಪೊರೇಟ್ ದಲ್ಲಾಳಿ ನೀರಾ ರಾಡಿಯಾ ಟೇಪ್ ಹಗರಣಕ್ಕೆ ಸಂಬಂಧಿಸಿದ ಗೋಪ್ಯ ವರದಿಯನ್ನು ತಮಗೆ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಉದ್ಯಮಿ ರತನ್ ಟಾಟಾ ಗುರುವಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಆದಾಯ ತೆರಿಗೆ ಮಹಾ ನಿರ್ದೇಶಕರು ನಡೆಸಿರುವ ತನಿಖೆಯ ಈ ವರದಿಯನ್ನು ಅಧ್ಯಯನ ಮಾಡಿದರೆ, ದೂರಸಂಪರ್ಕ ಸೇವಾ ಕಂಪೆನಿಗಳನ್ನು ಪ್ರತಿವಾದಿಗಳನ್ನಾಗಿಸಿ ಖಟ್ಲೆ ಹೂಡಲು ಅನುಕೂಲವಾಗುತ್ತದೆ ಎಂದು ಟಾಟಾ ವಾದಿಸಿದ್ದಾರೆ.

ನ್ಯಾಯಮೂರ್ತಿ ಜಿ.ಎಸ್ ಸಿಂಘ್ವಿ ನೇತೃತ್ವದ ಏಕಸದಸ್ಯ ಪೀಠದ ಮುಂದೆ  ಟಾಟಾ ಪರ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.