ADVERTISEMENT

ಗೋಹತ್ಯೆ ಆರೋಪ ಬಡಿದು ವ್ಯಕ್ತಿ ಕೊಲೆ

ಪಿಟಿಐ
Published 20 ಮೇ 2018, 19:36 IST
Last Updated 20 ಮೇ 2018, 19:36 IST

ಸತ್ನಾ: ಗೋಹತ್ಯೆ ಮಾಡಿದನೆಂದು ಆರೋಪಿಸಿ ವ್ಯಕ್ತಿಯನ್ನು ಹೊಡೆದು ಕೊಂದ   ನಾಲ್ವರನ್ನು ಮಧ್ಯಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಸತ್ನಾದಿಂದ 70 ಕಿ.ಮೀ. ದೂರದಲ್ಲಿರುವ ಅಂಜಾರ್‌ ಗ್ರಾಮದ ಅರಣ್ಯಪ್ರದೇಶದಲ್ಲಿ ಗೋಹತ್ಯೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ದಾಳಿ ಮಾಡಿದ ನಾಲ್ವರು, ಸಿರಾಜ್‌ (45) ಎಂಬುವರನ್ನು ಹೊಡೆದು ಕೊಂದಿದ್ದಾರೆ. ಅಲ್ಲದೆ, ಶಕೀಲ್‌ (35) ಎಂಬ ಯುವಕನ ಮೇಲೂ ತೀವ್ರ ಹಲ್ಲೆ ನಡೆಸಿದ್ದು,  ಅವರನ್ನು ಜಬಲ್‌ಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು  ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಾದ ಪವನ್‌ ಸಿಂಗ್, ವಿಜಯ್‌ ಸಿಂಗ್, ಫೂಲ್‌ಸಿಂಗ್‌ ಹಾಗೂ ನಾರಾಯಣ ಸಿಂಗ್‌  ಎಂಬುವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಜೇಶ ಹಿಂಗರ್ಕರ್‌ ತಿಳಿಸಿದ್ದಾರೆ.

ADVERTISEMENT

ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ 400ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.