ಮುಂಬೈ (ಪಿಟಿಐ): ಕಡತಗಳ ವಿಲೇವಾರಿಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಪ್ರಥ್ವಿರಾಜ್ ಚವಾಣ್ ಅವರು ವಿಳಂಬ ಧೋರಣೆ ತೋರುತ್ತಿದ್ದಾರೆ ಎಂದು ಇತ್ತೀಚೆಗೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್ಸಿಪಿ ಮುಖಂಡ ಅಜಿತ್ ಪವಾರ್ ಟೀಕಿಸಿದ್ದಾರೆ.
ಸತಾರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಕೆಲವು ಮಂದಿ ಕಡತಗಳನ್ನು ವಿಲೇವಾರಿ ಮಾಡದೆ ಹಾಗೆಯೇ ಇಟ್ಟುಕೊಳ್ಳುತ್ತಾರೆ. ಕಾರಣ ಏನೆಂದು ನನಗೆ ಗೊತ್ತಿಲ್ಲ. ಬಹುಶಃ ಕಡತಗಳ ಅಧ್ಯಯನ ನಡೆಸಲು ಇರಬಹುದು. ಆ ಕುರಿತು ನಾನು ಟೀಕಿಸಲಾರೆ~ ಎಂದು ಪವಾರ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.