ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದರೂ ಅಧಿಕಾರ ಹಿಡಿಯುವುದು ಸಾಧ್ಯವಾಗದಿರುವ ಬೆನ್ನಲೇ ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲೂ ಬಿಜೆಪಿಗೆ ಸೋಲುವ ಭೀತಿ ಎದುರಾಗಿದೆ ಎಂದು ಸಿಎಸ್ಡಿಎಸ್–ಲೋಕನೀತಿ ಸಮೀಕ್ಷೆ ತಿಳಿಸಿದೆ.
ಆಡಳಿತಾರೂಢ ಬಿಜೆಪಿ ಈ ಎರಡು ರಾಜ್ಯಗಳನ್ನು ಕಳೆದುಕೊಳ್ಳಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಯಿಂದ ತಿಳಿದು ಬಂದಿದೆ. ಸಿಎಸ್ಡಿಎಸ್–ಲೋಕನೀತಿ ನಡೆಸಿದ ಸಮೀಕ್ಷೆಯಲ್ಲಿ ಈ ಎರಡು ರಾಜ್ಯಗಳಲ್ಲಿ ಮತದಾರ ಬಿಜೆಪಿ ಪರವಾಗಿ ಇಲ್ಲ ಎಂದು ಹೇಳಿದೆ.
ರಾಜಸ್ಥಾನದಲ್ಲಿ ಬಿಜೆಪಿಗೆ ಶೇ 39ರಷ್ಟು, ಕಾಂಗ್ರೆಸ್ಗೆ ಶೇ 49ರಷ್ಟು ಮತದಾರರು ಒಲವು ತೋರಿದ್ದಾರೆ. ಮಧ್ಯಪ್ರದೇಶದಲ್ಲಿ ಶೇ 34ರಷ್ಟು ಜನರು ಬಿಜೆಪಿ ಪರವಾಗಿದ್ದರೆ, ಶೇ 44ರಷ್ಟು ಜನರು ಕಾಂಗ್ರೆಸ್ ಪರವಾಗಿದ್ದರೆ. ಈ ಎರಡು ರಾಜ್ಯಗಳಲ್ಲಿ ಮತದಾರರು ಕಾಂಗ್ರೆಸ್ ಪಕ್ಷ ಗೆಲ್ಲಿಸುವ ಮುನ್ಸೂಚನೆ ನೀಡಿದ್ದಾರೆ ಎಂದು ಸಿಎಸ್ಡಿಎಸ್–ಲೋಕನೀತಿ ತಿಳಿಸಿದೆ.
ಆಡಳಿತಾ ವಿರೋಧಿ ಅಲೆ ಇಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವರವಾಗಲಿದೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.