ಭುವನೇಶ್ವರ: ಚೆನ್ನೈ-ಹೌರಾ ಎಕ್ಸ್ಪ್ರೆಸ್ ರೈಲಿನ ಸಾಮಾನ್ಯ ಬೋಗಿಯಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯನ್ನು ತಕ್ಷಣವೇ ನಂದಿಸಿದ್ದರಿಂದ ಯಾವುದೇ ಹಾನಿ ಸಂಭವಿಸಿಲ್ಲ.
ಭುವನೇಶ್ವರ ಮುಖ್ಯ ರೈಲು ನಿಲ್ದಾಣದ ಕಡೆಗೆ ಹೊರಟಿದ್ದ ಈ ರೈಲು ಲಿಂಗರಾಜ ನಿಲ್ದಾಣದ ಸಮೀಪ ಆಗಮಿಸುತ್ತಿದ್ದಾಗ ಎಂಜಿನ್ನಿಂದ ಎರಡನೇ ಬೋಗಿಯಲ್ಲಿ ಬೆಂಕಿ ಕಾಣಿಸಿತು ಎಂದು ಪಶ್ಚಿಮ ಕರಾವಳಿ ರೈಲ್ವೆ ವಕ್ತಾರರು ತಿಳಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಬೆಂಕಿ ಕಾಣಿಸಿ ಪ್ರಯಾಣಿಕರು ರೈಲಿನ ತುರ್ತು ಸರಪಳಿ ಎಳೆದು ನಿಲ್ಲಿಸಿದರು. ಬಳಿಕ ಬೋಗಿಯಲ್ಲಿದ್ದ ಪ್ರಯಾಣಿಕರು ತಕ್ಷಣವೇ ಹೊರಗೆ ಬಂದರು. ಇದರಿಂದ ಎರಡು ಗಂಟೆಗಳ ಕಾಲ ರೈಲು ಸಂಚಾರ ವಿಳಂಬವಾಯಿತು. ಬೋಗಿಯ ಕೆಲ ಭಾಗ ಜಖಂಗೊಂಡಿದೆ.
ಪ್ರಯಾಣಿಕರ ನಿರ್ಲಕ್ಷ್ಯದಿಂದ ಈ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿದ್ದು, ಘಟನೆಗೆ ಕಾರಣ ತಿಳಿಯಲು ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.