ADVERTISEMENT

ಜಗನ್ ನ್ಯಾಯಾಂಗ ಬಂಧನ ಡಿ. 19ರವರೆಗೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2012, 8:49 IST
Last Updated 5 ಡಿಸೆಂಬರ್ 2012, 8:49 IST

ಹೈದರಾಬಾದ್ (ಪಿಟಿಐ) : ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ವೈ ಎಸ್‌ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ. ಎಸ್. ಜಗನ್‌ಮೋಹನ್ ರೆಡ್ಡಿ ಹಾಗು ಇತರೆ ಆರೋಪಿಗಳ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 19ರವರೆಗೆ ವಿಸ್ತರಿಸಿ ಸಿಬಿಐ ವಿಶೇಷ ನ್ಯಾಯಾಲಯವು ಬುಧವಾರ ಆದೇಶ ನೀಡಿತು.

ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಚಂಚಲಗುಡ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಜಗನ್‌ಮೋಹನ್ ರೆಡ್ಡಿ ಸೇರಿದಂತೆ ಮಾಜಿ ಆಂಧ್ರ ಸಚಿವ ಮೋಪಿದೇವಿ ವೆಂಕ ರಮಣ ರಾವ್, ಉದ್ಯಮಿ ನಿಮ್ಮಗಡ್ಡ ಪ್ರಸಾದ್ ಮತ್ತು ಉಳಿದವರನ್ನು ಹೆಚ್ಚಿನ ಭದ್ರತೆಯೊಂದಿಗೆ ಸಿಬಿಐ ಪ್ರಕರಣಗಳ ಪ್ರಥಮ ಹೆಚ್ಚುವರಿ ವಿಶೇಷ ನ್ಯಾಯಾಧೀಶರ  ಎದುರು ಹಾಜರುಪಡಿಸಲಾಯಿತು.

ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳ ನ್ಯಾಯಾಂಗ ಬಂಧನವನ್ನು14 ದಿನಗಳ ವರೆಗೆ ವಿಸ್ತರಿಸಿತು.

ADVERTISEMENT

ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಆಂಧ್ರ ಸಚಿವ ಧ್ರಮಣ ಪ್ರಸಾದ್ ರಾವ್ ಸಹ ನ್ಯಾಯಾಲಯದ ಎದುರು ಹಾಜರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.