ADVERTISEMENT

ಜಮ್ಮುವಿನಲ್ಲಿ ಕಾರ್ಯಾಚರಣೆ ಸ್ಥಗಿತಕ್ಕೆ ಸೂಚನೆ

ಪಿಟಿಐ
Published 16 ಮೇ 2018, 19:30 IST
Last Updated 16 ಮೇ 2018, 19:30 IST

ನವದೆಹಲಿ : ಪವಿತ್ರ ರಂಜಾನ್ ಮಾಸ ಆರಂಭವಾಗುವ ಕಾರಣ ಒಂದು ತಿಂಗಳ ಕಾಲ ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ನಡೆಸದಂತೆ ಭದ್ರತಾ ಪಡೆಗಳಿಗೆ ಕೇಂದ್ರ ಸರ್ಕಾರ ಮಹತ್ವದ ಸೂಚನೆ ನೀಡಿದೆ.

ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಲು ನೆರವಾಗುವಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗೃಹಸಚಿವಾಲಯ ತಿಳಿಸಿದೆ.

ಆದರೆ ದಾಳಿ ನಡೆದಾಗ ಪ್ರತಿದಾಳಿ ನಡೆಸಲು ಅಥವಾ ಅಮಾಯಕ ಜೀವಗಳಿಗೆ ಆಪತ್ತು ಎದುರಾದಾಗ ಪ್ರತಿರೋಧ ತೋರಲು ಸೇನೆಗೆ ಅಧಿಕಾರ ಇದೆ.

ADVERTISEMENT

ಈ ನಿರ್ಧಾರವನ್ನು ಎಲ್ಲರೂ ಗೌರವಿಸುವ ಮೂಲಕ ಮುಸ್ಲಿಂ ಸಹೋದರ, ಸಹೋದರಿಯರು ಯಾವುದೇ ಅಡ್ಡಿಯಿಲ್ಲದೆ ರಂಜಾನ್ ಆಚರಿಸಲು ನೆರವಾಗಬೇಕು ಎಂದು ಸಚಿವಾಲಯದ ವಕ್ತಾರರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.