ಜಮ್ಮು(ಪಿಟಿಐ): ಇಲ್ಲಿಯ ರಾಮ್ಬನ್ ಜಿಲ್ಲೆಯ ಶತಾನಿ ನಲ್ಲಾ ಪ್ರದೇಶದಲ್ಲಿ ಶುಕ್ರವಾರ ಭೂಕುಸಿತ ಉಂಟಾದ ಪರಿಣಾಮ 300 ಕಿ.ಮೀ ಉದ್ದದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಗಿದೆ.
ಜಮ್ಮುವಿನಿಂದ ಕಾಶ್ಮೀರಕ್ಕೆ ಇರುವ ಏಕೈಕ ಮಾರ್ಗ ಇದಾಗಿದೆ. ರಸ್ತೆ ಸಂಚಾರ ಸ್ಥಗಿತಗೊಂಡದ್ದರಿಂದ 400ಕ್ಕೂ ಹೆಚ್ಚು ವಾಹನಗಳು ವಿವಿಧ ಪ್ರದೇಶಗಳಲ್ಲಿ ನಿಂತಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗಡಿ ರಸ್ತೆ ಪ್ರಾಧಿಕಾರ(ಬಿಆರ್ಒ) ದ ಸಿಬ್ಬಂದಿಗಳು ರಸ್ತೆ ತೆರವು ಕಾರ್ಯದಲ್ಲಿ ತೊಡಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.