ಲಾಹೋರ್: ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತದ ಕುಲಭೂಷಣ್ ಜಾಧವ್ ಅವರಿಗೆ ಕ್ಷಮಾದಾನ ನೀಡದಂತೆ ಅಥವಾ ಶಿಕ್ಷೆಯನ್ನು ಕಡಿತಗೊಳಿಸದಂತೆ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆ ಇಲ್ಲಿನ ಹೈಕೋರ್ಟ್ನಲ್ಲಿ ಸೋಮವಾರ ಆರಂಭವಾಯಿತು.
ಮಹ್ಮೂದ್ ಅಹ್ಮದ್ ನಖ್ವಿ ಎಂಬುವವರು ಈ ಅರ್ಜಿ ಸಲ್ಲಿಸಿದ್ದಾರೆ. ‘ಆರೋಪಿಯು ತಪ್ಪನ್ನು ಒಪ್ಪಿಕೊಂಡಿದ್ದು, ಯಾವುದೇ ರಿಯಾಯಿತಿ ನೀಡುವ ಅಗತ್ಯವಿಲ್ಲ’ ಎಂದು ಅರ್ಜಿಯಲ್ಲಿ ಕೋರಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.