ನವದೆಹಲಿ: ಪಾಕಿಸ್ತಾನದ ಸೇನಾ ನ್ಯಾಯಾಲಯದಿಂದ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಭೇಟಿಗೆ ಅವರ ತಾಯಿ ಆವಂತಿಕಾ ಜಾಧವ್ ಅವರು ಸಲ್ಲಿಸಿರುವ ವೀಸಾ ಅರ್ಜಿಯ ಬಗ್ಗೆ ಪಾಕಿಸ್ತಾನ ವಹಿಸಿರುವ ಮೌನವನ್ನು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಪ್ರಶ್ನಿಸಿದ್ದಾರೆ.
ಸೋಮವಾರ ಸರಣಿ ಟ್ವೀಟ್ ಮಾಡಿರುವ ಸುಷ್ಮಾ, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಮುಖ್ಯಸ್ಥ ಸರ್ತಾಜ್ ಅಜೀಜ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
‘ಭಾರತದಲ್ಲಿ ಚಿಕಿತ್ಸೆ ಪಡೆಯಬೇಕೆಂದು ಬಯಸುವ ಪಾಕಿಸ್ತಾನದ ಎಲ್ಲಾ ನಾಗರಿಕರ ಬಗ್ಗೆ ನನಗೆ ಅನುಕಂಪವಿದೆ. ತಮ್ಮ ದೇಶದ ನಾಗರಿಕರ ಬಗ್ಗೆ ಸರ್ತಾಜ್ ಅಜೀಜ್ ಅವರಿಗೂ ಕಾಳಜಿ ಇದೆ ಎಂದುಕೊಳ್ಳುತ್ತೇನೆ. ಪಾಕಿಸ್ತಾನದ ನಾಗರಿಕರಿಗೆ ವೈದ್ಯಕೀಯ ವೀಸಾ ಸಿಗಬೇಕಾದರೆ ಸರ್ತಾಜ್ ಅಜೀಜ್ ಅವರ ಶಿಫಾರಸು ಅಗತ್ಯ. ತಮ್ಮ ದೇಶದ ನಾಗರಿಕರ ವೀಸಾಗೆ ಶಿಫಾರಸು ಮಾಡಲು ಅವರೇಕೆ ಹಿಂದುಮುಂದು ನೋಡುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ’ ಎಂದು ಸುಷ್ಮಾ ಟ್ವೀಟ್ನಲ್ಲಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.