ADVERTISEMENT

ಜಾನುವಾರು ಮಾರಾಟ ನಿರ್ಬಂಧ ವಿರುದ್ಧ ನಿರ್ಣಯ

ಪಿಟಿಐ
Published 12 ಜೂನ್ 2017, 18:47 IST
Last Updated 12 ಜೂನ್ 2017, 18:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿಲ್ಲಾಂಗ್: ಪ್ರಾಣಿಗಳ ಮಾರುಕಟ್ಟೆಗಳಲ್ಲಿ ಮಾಂಸದ ಉದ್ದೇಶಕ್ಕಾಗಿ ಜಾನುವಾರುಗಳ ಮಾರಾಟ ನಿರ್ಬಂಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದ ವಿರುದ್ಧ ಮೇಘಾಲಯ ವಿಧಾನಸಭೆಯಲ್ಲಿ ಸೋಮವಾರ ನಿರ್ಣಯ ಅಂಗೀಕರಿಸಲಾಯಿತು.

‘ಆದೇಶವು ರಾಜ್ಯದ ಅರ್ಥವ್ಯವಸ್ಥೆ ಮತ್ತು ಜನರ ಆಹಾರ ಪದ್ಧತಿ ಮೇಲೆ ಪರಿಣಾಮ ಬೀರಲಿದೆ’ ಎಂದು ಹೇಳಿರುವ ನಿರ್ಣಯ, ತಕ್ಷಣ ಆದೇಶ ವಾಪಸ್‌ ಪಡೆಯಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಮುಖ್ಯಮಂತ್ರಿ ಮುಕುಲ್‌ ಸಂಗ್ಮಾ ಅವರು ಮಂಡಿಸಿದ್ದ ನಿರ್ಣಯವನ್ನು ಪಕ್ಷಭೇದ ಮರೆತು ಎಲ್ಲ ಪಕ್ಷಗಳೂ ಬೆಂಬಲಿಸಿದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.