ADVERTISEMENT

ಜಿಲ್ಲಾಧಿಕಾರಿಗಳ ಗೈರು:ಚಿದಂಬರಂ ಸಭೆ ರದ್ದು

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2011, 19:30 IST
Last Updated 13 ಸೆಪ್ಟೆಂಬರ್ 2011, 19:30 IST

ಶಿವಗಂಗಾ, ತಮಿಳುನಾಡು (ಪಿಟಿಐ): ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಪರಾಮರ್ಶಿಸಲು ಕೇಂದ್ರ ಗೃಹಸಚಿವ ಪಿ. ಚಿದಂಬರಂ ಅವರು ಕರೆದಿದ್ದ ಸಭೆಗೆ ಶಿವಗಂಗಾ ಮತ್ತು ಪುದುಕೊಟ್ಟಾಯ್ ಜಿಲ್ಲೆಯ ಜಿಲ್ಲಾಧಿಕಾರಿಗಳು ಗೈರು ಹಾಜರಾದ ಕಾರಣ ಸಭೆಯನ್ನು ರದ್ದುಪಡಿಸಲಾಯಿತು.

ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಜಾಗೃತಿ ಮತ್ತು ವಿಚಕ್ಷಣಾ ಸಮಿತಿ ಸಭೆಗೆ ಈ ಇಬ್ಬರು ಜಿಲ್ಲಾಧಿಕಾರಿಗಳು ಬರದಿರುವ ಹಿನ್ನೆಲೆಯಲ್ಲಿ ಸಭೆ ರದ್ದುಪಡಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.