ADVERTISEMENT

`ಝೀ' ಪತ್ರಕರ್ತರ ಜಾಮೀನು ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2012, 19:30 IST
Last Updated 3 ಡಿಸೆಂಬರ್ 2012, 19:30 IST

ನವದೆಹಲಿ ( ಪಿಟಿಐ): ಸುಲಿಗೆ ಯತ್ನ ಆರೋಪದ ಮೇಲೆ ಬಂಧಿತರಾಗಿರುವ `ಝೀ' ಸಮೂಹದ ಇಬ್ಬರು ಹಿರಿಯ ಪತ್ರಕರ್ತರ ಜಾಮೀನು ಅರ್ಜಿಯನ್ನು ಇಲ್ಲಿನ ಮೆಟ್ರೋಪಾಲಿಟನ್ ನ್ಯಾಯಾಧೀಶ ರಾಜಿಂದರ್ ಸಿಂಗ್ ಅವರು ಸೋಮವಾರ ವಜಾಗೊಳಿಸಿದ್ದಾರೆ.

`ಝೀ ನ್ಯೂಸ್' ಮುಖ್ಯಸ್ಥ ಸುಧೀರ್ ಚೌಧರಿ ಹಾಗೂ `ಝೀ ಬಿಸಿನೆಸ್' ಸಂಪಾದಕ ಸಮೀರ್ ಅಹ್ಲುವಾಲಿಯ ಅವರು ಜಾಮೀನು ಮೇಲೆ ಬಿಡುಗಡೆಯಾಗಲು ಹೊಸ ಕಾರಣಗಳನ್ನು ನೀಡಿಲ್ಲ ಎಂದು ರಾಜಿಂದರ್ ಸಿಂಗ್ ಹೇಳಿದ್ದಾರೆ.

ಇವರಿಬ್ಬರು ಮೊದಲ ಬಾರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನವೆಂಬರ್ 28ರಂದು ನ್ಯಾಯಾಲಯ ವಜಾಗೊಳಿಸಿತ್ತು.

ತನಿಖೆಗೆ ಸಿದ್ಧ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಎದುರಿಸಲು ಸಿದ್ಧ ಎಂದು  `ಝೀ' ಸಮೂಹದ ಅಧ್ಯಕ್ಷ ಸುಭಾಷ್ ಚಂದ್ರ ಅವರು ಸೋಮವಾರ ಪೊಲೀಸರಿಗೆ ತಿಳಿಸಿದ್ದಾರೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.