ರಾಯಪುರ: ಬಸ್ತಾರ್ ಜಿಲ್ಲೆಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿದ್ದ ಒಂಬತ್ತು ಟ್ರ್ಯಾಕ್ಟರ್ಗೆ ನಕ್ಸಲರು ಬೆಂಕಿ ಹಚ್ಚಿದ್ದಾರೆ.
‘ಅಮ್ಲಿಧಾರ್ ಘಾಟಿಯಲ್ಲಿ ಸೋಮವಾರ ರಾತ್ರಿ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಲಾಗಿದೆ. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
‘ಶಸ್ತ್ರಸಜ್ಜಿತ ನಕ್ಸಲರು ರಸ್ತೆ ಕಾಮಗಾರಿ ನಡೆಸದಂತೆ ಕಾರ್ಮಿಕರಿಗೂ ಬೆದರಿಕೆ ಹಾಕಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.