ಪ್ರತಾಪಗಡ (ಉತ್ತರ ಪ್ರದೇಶ): ಕಳೆದ ತಿಂಗಳ ಹಿಂದೆ ನಡೆದ ಡಿಎಸ್ಪಿ ಜಿಯಾ-ಉಲ್-ಹಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯೊಬ್ಬನನ್ನು ಸಿಬಿಐ ಶನಿವಾರ ಬಂಧಿಸಿದೆ.
ಈ ಕೊಲೆ ಪ್ರಕರಣವನ್ನು ಭೇದಿಸಿರುವುದಾಗಿ ಸಿಬಿಐ ಹೇಳಿಕೊಂಡಿದೆ. ಗ್ರಾಮ ಪಂಚಾಯಿತಿ ಮುಖಂಡ ದಿ.ನನ್ಹೆ ಯಾದವ್ ಅವರ ಪುತ್ರ ಬಬ್ಲೂ ಯಾದವ್ ಎಂಬಾತನನ್ನು ಬಂಧಿಸಿರುವುದಾಗಿ ಸಿಬಿಐ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.