ನವದೆಹಲಿ (ಪಿಟಿಐ): ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅವ್ಯವಹಾರಕ್ಕೆ ಸಂಬಂಧಿಸಿದ ಆರು ಪ್ರಕರಣಗಳ ತನಿಖೆಯನ್ನು ಸಿಬಿಐ ಈಗಾಗಲೇ ಪೂರ್ಣಗೊಳಿಸಿದೆ.
ಸಿಬಿಐ ಸೋಮವಾರ ಸುಪ್ರೀಂಕೋರ್ಟ್ಗೆ ಸಲ್ಲಿಸಲಿರುವ ಸ್ಥಿತಿಗತಿ ವರದಿಯಲ್ಲಿ ತನಿಖೆ ಪೂರ್ಣ-ಗೊಂಡಿರುವುದನ್ನು ತಿಳಿಸಲಿದೆ.
ಯಾವ ಪ್ರಕರಣಗಳು ಪೂರ್ಣಗೊಂಡಿವೆ ಎಂಬ ಮಾಹಿತಿಯನ್ನು ನೀಡಲು ಮೂಲಗಳು ನಿರಾಕರಿಸಿವೆ.
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಹಿಂಡಾಲ್ಕೊ, ಎಎಂಆರ್ ಐರನ್ ಆ್ಯಂಡ್ ಸ್ಟೀಲ್, ಜಿಂದಾಲ್ ಸ್ಟೀಲ್ ಆ್ಯಂಡ್ ಪವರ್, ಜಾರ್ಖಂಡ್ ಇಸ್ಪಾಟ್ ಸೇರಿದಂತೆ 14 ಸಂಸ್ಥೆಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.