ADVERTISEMENT

ತಪ್ಪಿತಸ್ಥರನ್ನು ಶಿಕ್ಷಿಸಿ: ಪ್ರಣವ್‌

​ಪ್ರಜಾವಾಣಿ ವಾರ್ತೆ
Published 11 ಜುಲೈ 2017, 19:30 IST
Last Updated 11 ಜುಲೈ 2017, 19:30 IST
ತಪ್ಪಿತಸ್ಥರನ್ನು ಶಿಕ್ಷಿಸಿ: ಪ್ರಣವ್‌
ತಪ್ಪಿತಸ್ಥರನ್ನು ಶಿಕ್ಷಿಸಿ: ಪ್ರಣವ್‌   

ನವದೆಹಲಿ: ದಾಳಿಯನ್ನು ತೀವ್ರವಾಗಿ ಖಂಡಿಸಿರುವ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ,  ದುಷ್ಕೃತ್ಯ ಎಸಗಿದವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಮತ್ತು ಇತರೆ ಭದ್ರತಾ ಸಂಸ್ಥೆಗಳಿಗೆ ಸೂಚಿಸಿದ್ದಾರೆ.

‘ಮುಗ್ಧ ಜೀವಗಳನ್ನು ಗುರಿಯಾಗಿಸಿಕೊಂಡು ನಡೆಸಿರುವ ಇಂತಹ ಸಂವೇದನಾರಹಿತ ಕೃತ್ಯಗಳು ಸಮಾಜದ ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ನಡೆದ ದಾಳಿ. ಇದು ಸಾರ್ವತ್ರಿಕ ಖಂಡನೆಗೆ ಅರ್ಹವಾದುದು. ಬದ್ಧತೆಯಿಂದ ಮತ್ತು ಸಹಭಾಗಿತ್ವದ ಕ್ರಮದಿಂದ ತಪ್ಪಿತಸ್ಥರನ್ನು ಶಿಕ್ಷಿಸಬೇಕು’ ಎಂದು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಎನ್‌.ಎನ್‌. ವೊಹ್ರಾ ಅವರಿಗೆ ಕಳುಹಿಸಿರುವ ಸಂದೇಶದಲ್ಲಿ ಮುಖರ್ಜಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT