ADVERTISEMENT

ತಪ್ಪು ಮಾಡದಿದ್ದ ಮೇಲೆ ರಾಜೀನಾಮೆ ಏಕೆ?: ತೇಜಸ್ವಿ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2017, 19:30 IST
Last Updated 12 ಜುಲೈ 2017, 19:30 IST
ತಪ್ಪು ಮಾಡದಿದ್ದ ಮೇಲೆ ರಾಜೀನಾಮೆ ಏಕೆ?: ತೇಜಸ್ವಿ ಪ್ರಶ್ನೆ
ತಪ್ಪು ಮಾಡದಿದ್ದ ಮೇಲೆ ರಾಜೀನಾಮೆ ಏಕೆ?: ತೇಜಸ್ವಿ ಪ್ರಶ್ನೆ   

ಪಟ್ನಾ: ‘ಉಪಮುಖ್ಯಮಂತ್ರಿಯಾಗಿ ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ರಾಜೀನಾಮೆಯ ಪ್ರಶ್ನೆಯೇ ಇಲ್ಲ’ ಎಂದು  ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಲಾಲು ಪ್ರಸಾದ್ ಅವರು ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ, ಹೋಟೆಲ್‌ಗಳಿಗೆ ಅಕ್ರಮವಾಗಿ ಜಮೀನು ಮಂಜೂರು ಮಾಡಿದ ಆರೋಪದ ಪ್ರಕರಣದಲ್ಲಿ ಸಿಬಿಐ ದಾಖಲಿಸಿರುವ ಎಫ್‌ಐಆರ್‌ನಲ್ಲಿ ತೇಜಸ್ವಿ ಅವರ ಹೆಸರೂ ಇದೆ. ಹೀಗಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ‘ತೇಜಸ್ವಿ ಆರೋಪಮುಕ್ತನಾಗಿ ಬರಲಿ’ ಎಂದು ಹೇಳಿದ್ದರು. ಈಗ ನಿತೀಶ್‌ ಹೇಳಿಕೆಗೆ ತೇಜಸ್ವಿ ತಿರುಗೇಟು ನೀಡಿದ್ದಾರೆ.

ಕಳೆದ ಶುಕ್ರವಾರ ಲಾಲು–ರಾಬ್ಡಿದೇವಿ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ ನಂತರ ಇದೇ ಮೊದಲ ಬಾರಿ ತೇಜಸ್ವಿ ಈ ಬಗ್ಗೆ ಮಾತನಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.