ADVERTISEMENT

ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್‌ ನೀರು ಬಿಡಲು ರಾಜ್ಯಕ್ಕೆ ಸುಪ್ರೀಂ ಆದೇಶ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2016, 11:37 IST
Last Updated 20 ಸೆಪ್ಟೆಂಬರ್ 2016, 11:37 IST
ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್‌ ನೀರು ಬಿಡಲು ರಾಜ್ಯಕ್ಕೆ  ಸುಪ್ರೀಂ ಆದೇಶ
ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್‌ ನೀರು ಬಿಡಲು ರಾಜ್ಯಕ್ಕೆ ಸುಪ್ರೀಂ ಆದೇಶ   

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ. 21 ರಿಂದ 27ರವರೆಗೆ ತಮಿಳುನಾಡಿಗೆ  6 ಸಾವಿರ ಕ್ಯೂಸೆಕ್‌ ನೀರು ಬಿಡಲು  ರಾಜ್ಯ ಸರ್ಕಾರಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್‌  ಸೂಚಿಸಿದೆ.

ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ತಮಿಳುನಾಡಿಗೆ ನೀರು ಬಿಡಲು ಆದೇಶಿಸಿತು.

ನೀರು ಹಂಚಿಕೆ ಸಂಬಂಧ ನಾಲ್ಕು ವಾರಗಳಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT