
ಪ್ರಜಾವಾಣಿ ವಾರ್ತೆಚೆನ್ನೈ (ಪಿಟಿಐ): ತಮಿಳುನಾಡು ಸಚಿವ ಸಿ. ಕರುಪ್ಪಸ್ವಾಮಿ (57 ) ಶನಿವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕರುಪ್ಪಸ್ವಾಮಿ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಮೃತರು ತಾಯಿ, ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಮುಖ್ಯಮಂತ್ರಿ ಜಯಲಲಿತಾ ಅವರ ಕ್ಯಾಬಿನೆಟ್ ಸಚಿವರಲ್ಲಿ ಮೃತಪಟ್ಟವರಲ್ಲಿ ಕರುಪ್ಪಸ್ವಾಮಿ ಎರಡನೆಯವರು. ಈ ಹಿಂದೆ ಮತ್ತೊಬ್ಬ ಸಚಿವ ಮರಿಯಮ್ ಪಿಚೈ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.
ಕರುಪ್ಪಸ್ವಾಮಿ ಅವರು ಎಐಡಿಎಂಕೆಯ ಸಂಘಟನಾ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.