ADVERTISEMENT

ತೀಸ್ತಾ ತನಿಖೆ: ಸುಪ್ರೀಂ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2012, 19:30 IST
Last Updated 21 ಫೆಬ್ರುವರಿ 2012, 19:30 IST

ನವದೆಹಲಿ (ಪಿಟಿಐ):  2002ರ ಗಲಭೆಯಲ್ಲಿ ಸತ್ತವರ ಶವಗಳನ್ನು ಅಗೆದು ತೆಗೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ವಿರುದ್ಧ ತನಿಖೆ ಆರಂಭಿಸಿರುವ ಗುಜರಾತ್ ರಾಜ್ಯ ಸರ್ಕಾರದ ಕ್ರಮಕ್ಕೆ ಸುಪ್ರೀಂಕೋರ್ಟ್ ಬುಧವಾರ ತೀವ್ರವಾಗಿ ಆಕ್ಷೇಪಿಸಿದೆ.

ಇದು ಸೆಟಲ್ವಾಡ್ ಅವರನ್ನು ಬಲಿಪಶು ಮಾಡಲು ಹೆಣೆದಿರುವ  ಹುಸಿ ಪ್ರಕರಣ ಎಂದು ಹೇಳಿದೆ.

`ಇದು ಒಂದಿಷ್ಟೂ ಸತ್ಯಾಂಶವಿಲ್ಲದ, ತೀಸ್ತಾ ಅವರನ್ನು ಬಲಿಪಶು ಮಾಡುವ ಹುನ್ನಾರದಿಂದ ಹೆಣೆದಿರುವ ಸುಳ್ಳು ಪ್ರಕರಣವಾಗಿದೆ~ ಎಂದು ನ್ಯಾಯಮೂರ್ತಿಗಳಾದ ಅಫ್ತಾಬ್ ಅಲಂ ಮತ್ತು ರಂಜನಾ ಪ್ರಕಾಶ್ ದೇಸಾಯಿ ಅವರ ನ್ಯಾಯಪೀಠ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.