ಹೈದರಾಬಾದ್: ತೆಲಂಗಾಣದ ಶುಷ್ಕ ಭೂಪ್ರದೇಶದ ರೈತರಿಗೆ, ಪ್ರತಿ ಎಕರೆಗೆ ₹8 ಸಾವಿರ ಸಹಾಯಧನ ನೀಡುವ ನೂತನ ‘ರೈತುಬಂಧು’ ಯೋಜನೆಗೆ ರಾಜ್ಯ ಸರ್ಕಾರ ಗುರುವಾರ ಚಾಲನೆ ನೀಡಿದೆ. 58 ಲಕ್ಷಕ್ಕೂ ಹೆಚ್ಚು ರೈತರು ಇದರಿಂದ ಲಾಭ ಪಡೆಯಲಿದ್ದಾರೆ.
ಕರೀಂನಗರ ಜಿಲ್ಲೆಯ ಧರ್ಮರಾಜುಪಲ್ಲೆ–ಇಂದಿರಾನಗರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ರೈತರೊಬ್ಬರಿಗೆ ಮೊದಲ ಚೆಕ್ ಹಾಗೂ ಪಾಸುಬುಕ್ ನೀಡುವ ಮೂಲಕ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಅಧಿಕೃತವಾಗಿ ಯೋಜನೆ ಉದ್ಘಾಟಿಸಿದರು.
ಈ ಯೋಜನೆಗೆ ಮಂಜೂರು ಮಾಡಿದ ಹಣವನ್ನು ಬೇರೆ ಕೆಲಸಗಳಿಗೆ ಬಳಸಬಾರದು ಎಂದು ಸೂಚಿಸಲಾಗಿದೆ. ಕೇಂದ್ರ ಸರ್ಕಾರ ನರೇಗಾವನ್ನು ಕೃಷಿ ಅಥವಾ ಕೃಷಿ ಸಂಬಂಧಿ ಜತೆಗೆ ಜೋಡಣೆ ಮಾಡಲು ಸಭೆಯಲ್ಲಿ ನೆರೆದಿದ್ದ ರೈತರು ನಿರ್ಣಯ ಕೈಗೊಂಡರು.
ಜತೆಗೆ ಎಲ್ಲ ಬೆಳೆಗಳಿಗೂ ನೀಡುತ್ತಿರುವ ಕನಿಷ್ಠ ಬೆಂಬಲ ಬೆಲೆಯನ್ನು ಶೇ 25ರಷ್ಟು ಹೆಚ್ಚಿಸಬೇಕು ಎಂದೂ ನಿರ್ಣಯ ಕೈಗೊಳ್ಳಲಾಗಿದೆ.
ಸಾಲಗಾರ ರೈತರಿಗೆ ನೆರವಾಗುವುದೇ ಈ ಯೋಜನೆ ಉದ್ದೇಶವಾಗಿದೆ. ಈ ಯೋಜನೆಯಿಂದ ಸರ್ಕಾರದ ಬೊಕ್ಕಸಕ್ಕೆ ₹12,000 ಕೋಟಿ ಹೊರೆ ಬೀಳಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.