
ಪ್ರಜಾವಾಣಿ ವಾರ್ತೆವಾರಂಗಲ್ (ಪಿಟಿಐ): ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಒತ್ತಾಯಿಸಿ ಯುವಕನೊಬ್ಬ ವಾರಂಗಲ್ನಲ್ಲಿ ಸೋಮವಾರ ಆತ್ಮಾಹುತಿ ಮಾಡಿಕೊಂಡಿದ್ದಾನೆ. ಆತ್ಮಾಹುತಿಗೆ ಯತ್ನಿಸಿದ ಇನ್ನೊಬ್ಬ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರತ್ಯೇಕ ರಾಜ್ಯದ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಮಂಗಳವಾರ ತೆಲಂಗಾಣ ಪ್ರಾಂತ್ಯದಲ್ಲಿ ಬಂದ್ಗೆ ಕರೆ ನೀಡಿದೆ.
30 ವರ್ಷದ ರಾಜಮೌಳಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು `ಜೈ ತೆಲಂಗಾಣ~ ಘೋಷಣೆ ಕೂಗಿ ಬೆಂಕಿ ಹಚ್ಚಿಕೊಂಡಿದ್ದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇಲ್ಲಿನ ಹನಮಕೊಂಡಾದ ಸಾರ್ವಜನಿಕ ಉದ್ಯಾನದಲ್ಲಿ ಈ ಘಟನೆ ಜರುಗಿದೆ. ಇದೇ ಸ್ಥಳದಲ್ಲಿ 2 ದಿನಗಳ ಹಿಂದಷ್ಟೇ ಎಂಬಿಎ ವಿದ್ಯಾರ್ಥಿ ಎಲ್.ಭೋಜ್ಯ ನಾಯ್ಕ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಆತ್ಮಾಹುತಿ ಮಾಡಿಕೊಂಡಿದ್ದ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.