ಹೈದರಾಬಾದ್ (ಪಿಟಿಐ): ತೆಲುಗಿನ ಯುವ ನಟ ಉದಯ್ ಕಿರಣ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಇಲ್ಲಿನ ಶ್ರೀನಗರ ಕಾಲೋನಿಯಲ್ಲಿರುವ ತಮ್ಮ ಪ್ಲಾಟ್ನಲ್ಲಿ ಭಾನುವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೌಟುಂಬಿಕ ಕಲಹ ಅಥವಾ ಮಾನಸಿ ಕ ಖಿನ್ನತೆಯಿಂದಾಗಿ ಉದಯ್ ಕಿರಣ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಚಿತ್ರಂ, ನುವ್ವು ನೇನು, ಮನಸಂತಾ ನುವ್ವೆ ಉದಯ್ ಕಿರಣ್ ನಟಿಸಿದ ಜನಪ್ರಿಯ ಚಿತ್ರಗಳು. 2001ರಲ್ಲಿ ಉದಯ್ ಕಿರಣ್ಗೆ ಫಿಲಂ ಫೇರ್ ಪ್ರಶಸ್ತಿ ಸಂದಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.