ಕಾನ್ಪುರ: ಅಸ್ಥಿಮಜ್ಜೆ ಸಮಸ್ಯೆಯಿಂದ ಬಳಲುತ್ತಿರುವ ತಾಯಿ ಮತ್ತು ಮಗಳು ತಮಗೆ ಪರೋಕ್ಷ ದಯಾ ಮರಣ ನೀಡುವಂತೆ ಕೋರಿ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದ್ದಾರೆ.
ಉತ್ತರ ಪ್ರದೇಶ ಕಾನ್ಪುರದ ಶಶಿ ಮಿಶ್ರಾ (59) ಹಾಗೂ ಅನಾಮಿಕಾ ಮಿಶ್ರಾ (33) ಈ ಮನವಿ ಸಲ್ಲಿಸಿದ್ದಾರೆ. ಮ್ಯಾಜಿಸ್ಟ್ರೇಟ್ ಕೋರ್ಟ್ನ ರಾಜ ನಾರಾಯಣ ಪಾಂಡೆ ಅವರು ಈ ಮನವಿ ಪತ್ರವನ್ನು ರಾಷ್ಟ್ರಪತಿಗಳಿಗೆ ರವಾನಿಸಿದ್ದಾರೆ.
‘ನಮ್ಮದು ಆನುವಂಶಿಕ ಕಾಯಿಲೆ. ನನ್ನ ತಂದೆ ಕೂಡ ಇದೇ ರೋಗಕ್ಕೆ ತುತ್ತಾಗಿ 15 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಈ ಕಾಯಿಲೆಯಿಂದ ನಾವು ಮಲಗಿದಲ್ಲಿಯೇ ಇರಬೇಕಾಗಿದೆ. ದಯಾಮರಣ ಕೋರಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೂ ಈ ಹಿಂದೆಯೇ ಪತ್ರ ಬರೆದಿದ್ದೆವು’ ಎಂದು ಪತ್ರದಲ್ಲಿ ಅನಾಮಿಕಾ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.