ತಿರುವನಂತಪುರ : ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ವ್ಯಾಪ್ತಿಗೆ ಒಳಪಟ್ಟಿರುವ ದೇವಸ್ಥಾನಗಳಲ್ಲಿ ಖಾಲಿ ಇರುವ 62 ಅರ್ಚಕರ ಹುದ್ದೆಗಳ ನೇಮಕಕ್ಕೆ ಶಿಫಾರಸು ಮಾಡಿರುವವರ ಪಟ್ಟಿಯಲ್ಲಿ 36 ಬ್ರಾಹ್ಮಣೇತರರು ಇದ್ದಾರೆ. ಇವರ ಪೈಕಿ ಆರು ಮಂದಿ ದಲಿತರು.
ಕೇರಳ ದೇವಸ್ವಂ ನೇಮಕಾತಿ ಮಂಡಳಿ ಈ ಶಿಫಾರಸು ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ. ಅರ್ಚಕರ ಹುದ್ದೆಗೆ 6 ದಲಿತರ ನೇಮಕಕ್ಕೆ
ಶಿಫಾರಸು ಮಾಡಿರುವುದು ಇದೇ ಮೊದಲು.
ಶಬರಿಮಲೆ ಅಯ್ಯಪ್ಪ ಸೇರಿದಂತೆ 1,248 ದೇವಸ್ಥಾನಗಳು ಟಿಡಿಬಿ ವ್ಯಾಪ್ತಿಗೆ ಒಳಪಟ್ಟಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.