ಪಣಜಿ (ಪಿಟಿಐ): ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಅಪರಾಧ ವಿಭಾಗದ ಪೊಲೀಸರು ಗೋವಾದ ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಹಳೇ ಗೋವಾದಲ್ಲಿರುವ ಸೇಂಟ್ ಫ್ರಾನ್ಸಿಸ್ ಝೇವಿಯರ್ ಚರ್ಚ್ನ ವಾರ್ಷಿಕೋತ್ಸವದ ಸಂದರ್ಭದಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಇಬ್ಬರನ್ನು ಡಿ. 3ರಂದು ವಶಕ್ಕೆ ಪಡೆಯಲಾಗಿತ್ತು ಎಂದು ಐಜಿಪಿ ಒ.ಪಿ. ಮಿಶ್ರಾ ಶನಿವಾರ ಹೇಳಿದರು.
ಬಂಧಿತರಿಬ್ಬರು ಸುಪಾರಿ ಹಂತಕರು ಎನ್ನಲಾಗುತ್ತಿದೆ. ಈ ಬಗ್ಗೆ ಗೋವಾ ಮತ್ತು ಪುಣೆ ಪೊಲೀಸರು ಜಂಟಿ ತನಿಖೆ ನಡೆಸುತ್ತಿದ್ದಾರೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.