ADVERTISEMENT

ದಾಳಿ : ಆರೋಪ ನಿಗದಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 19:30 IST
Last Updated 1 ಅಕ್ಟೋಬರ್ 2012, 19:30 IST

ನವದೆಹಲಿ (ಐಎಎನ್‌ಎಸ್): ದೆಹಲಿ ಹೈಕೋರ್ಟ್ ಹೊರಗೆ 2011ರಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನ ವಿರುದ್ಧ ವಿಶೇಷ ನ್ಯಾಯಾಲಯವು ಸೋಮವಾರ ಭಯೋತ್ಪಾದನಾ ಆರೋಪ ನಿಗದಿ ಮಾಡಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಮೂರ್ತಿ ಎಚ್.ಎಸ್. ಶರ್ಮ ಅವರು ಗೌಪ್ಯ ವಿಚಾರಣೆ ನಡೆಸಿ ವಾಸಿಮ್ ಅಕ್ರಮ್ ಮಲಿಕ್ ವಿರುದ್ಧ ಆರೋಪ ನಿಗದಿ ಮಾಡಿದ್ದಾರೆ. ಇದೇ  15ರಿಂದ ಈತನ ವಿಚಾರಣೆ ಆರಂಭವಾಗಲಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.