
ಪ್ರಜಾವಾಣಿ ವಾರ್ತೆನವದೆಹಲಿ(ಐಎಎನ್ಎಸ್): `ಹದಿನಾಲ್ಕು ವರ್ಷದ ದೆಹಲಿಯ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಬದೌನ್ನಲ್ಲಿ ನಡೆದಿದೆ' ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ.
ನೆಬ್ಸರಾಯ್ನ ತನ್ನ ಮನೆಯಿಂದ ಬಾಲಕಿ ಜೂನ್ 5ರಂದು ಕಾಣೆಯಾಗಿದ್ದಳು. 6 ದಿನಗಳ ಬಳಿಕ ಪೋಷಕರಿಗೆ ಕರೆ ಮಾಡಿ ಸಂಕಷ್ಟದಲ್ಲಿರುವುದಾಗಿ ಮಾಹಿತಿ ನೀಡಿದ್ದಳು.
ಈ ಮಾಹಿತಿ ಆಧರಿಸಿ ಜೂನ್ 12ರಂದು ಕಾರ್ಯಾಚರಣೆ ನಡೆಸಿದ ಪೊಲೀಸರು ಬಾಲಕಿಯನ್ನು ಅಡಗಿಸಿಟ್ಟಿದ್ದ ಜಾಗಕ್ಕೆ ತೆರಳಿ ಜರಿಬ್ ಅಹಮದ್ (28) ಎಂಬಾತನನ್ನು ಬಂಧಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ಇನ್ನೊಬ್ಬ ತಪ್ಪಿಸಿಕೊಂಡಿದ್ದಾನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.