
ಪ್ರಜಾವಾಣಿ ವಾರ್ತೆ
ನವದೆಹಲಿ (ಪಿಟಿಐ): ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾಷಣ ಮಾಡುತ್ತಿದ್ದಾಗ ಮಹಿಳೆಯೊಬ್ಬರು ಅವರ ಮುಖಕ್ಕೆ ಮಸಿ ಎರಚಿದ ಘಟನೆ ಭಾನುವಾರ ನಡೆದಿದೆ.
ಇಲ್ಲಿನ ಛತ್ರಸಾಲ ಮೈದಾನದಲ್ಲಿ ಸಮ ಮತ್ತು ಬೆಸ ಸಂಖ್ಯೆ ಯೋಜನೆಯ ಯಶಸ್ವಿ ಕುರಿತು ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಲ್ಲಿ ಭಾಷಣ ಮಾಡುತ್ತಿದ್ದಾಗ ಈ ಘಟನೆ ಜರುಗಿದೆ.
ಬಿಗಿ ಬಂದೋಬಸ್ತ್ ನಡುವೆಯೂ ಆ ಮಹಿಳೆ ಕೇಜ್ರಿವಾಲ್ ಭಾಷಣ ಮಾಡುತ್ತಿದ್ದ ವೇದಿಕೆಗೆ ತೆರಳಿ ಮಸಿ ಎರಚಿದ್ದಾರೆ.
ಸ್ಥಳದಲ್ಲೇ ಇದ್ದ ಪೊಲೀಸರು ಕೂಡಲೇ ಆ ಮಹಿಳೆಯನ್ನು ಬಂಧಿಸಿದ್ದಾರೆ. ಆ ಮಹಿಳೆಯ ಬಗ್ಗೆ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.