ನವದೆಹಲಿ: ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆ ಶುಕ್ರವಾರ ಉದ್ಘಾಟನೆಯಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ಈ ಸೇತುವೆಯನ್ನು ಉದ್ಘಾಟಿಸಲಿದ್ದಾರೆ.
9.3 ಕಿಲೋ ಮೀಟರ್ ಉದ್ದದ ಈ ಸೇತುವೆ ಅರುಣಾಚಲ ಪ್ರದೇಶದ ಧೋಲಾ ಮತ್ತು ಅಸ್ಸಾಂನ ಸಾಧಿಯಾಗೆ ಸಂಪರ್ಕಿಸಲಿದೆ.
‘ಮನ್ ಕಿ ಬಾತ್’ ಇಂದು ಬಿಡುಗಡೆ
ನವದೆಹಲಿ (ಪಿಟಿಐ): ಪ್ರಧಾನಿ ನರೇಂದ್ರ ಅವರ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ ಪುಸ್ತಕ ರೂಪದಲ್ಲಿ ಶುಕ್ರವಾರ ಬಿಡುಗಡೆಗೊಳ್ಳಲಿದೆ.
ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಪುಸ್ತಕದ ಮೊದಲ ಪ್ರತಿ ಸ್ವೀಕರಿಸುವರು. ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಪುಸ್ತಕ ಬಿಡುಗಡೆಗೊಳಿಸುವರು.
‘ಮನ್ ಕಿ ಬಾತ್: ಎ ಸೋಷಿಯಲ್ ರೆವಲ್ಯುಷನ್ ಆನ್ ರೇಡಿಯೊ’ ಪುಸ್ತಕವನ್ನು ರಾಜೇಶ್ ಜೈನ್ ಬರೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.