ADVERTISEMENT

ದೇಶದ ಕಾನೂನಿನ ಪ್ರಕಾರವೇ ತನಿಖೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2012, 19:30 IST
Last Updated 26 ಫೆಬ್ರುವರಿ 2012, 19:30 IST

ತಿರುವನಂತಪುರ(ಪಿಟಿಐ): ಇಬ್ಬರು ಮೀನುಗಾರನ್ನು  ಹತ್ಯೆಗೈದ ಇಟಲಿಯ ಇಬ್ಬರನ್ನು ಬಂಧಿಸಲಾಗಿದ್ದು, ಭಾರತೀಯ ಕಾನೂನಿನ ಪ್ರಕಾರ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ ಎಂದು ರಕ್ಷಣಾ ಸಚಿವ ಎ.ಕೆ.ಆಂಟನಿ ಭಾನುವಾರ ತಿಳಿಸಿದ್ದಾರೆ.

ಭಾರತೀಯ ಮೀನುಗಾರರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣವನ್ನು ಕೇರಳ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ, ಈ ತನಿಖೆಗೆ ಕೇಂದ್ರ ಸಂಪೂರ್ಣ ನೆರವು ನೀಡುತ್ತದೆ ಎಂದೂ ಅವರು ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.