ADVERTISEMENT

ದ್ವೇಷ ಬಿತ್ತುತ್ತಿರುವ ರಾಹುಲ್‌: ಶಾ ಟೀಕೆ

ಪಿಟಿಐ
Published 5 ಏಪ್ರಿಲ್ 2018, 19:30 IST
Last Updated 5 ಏಪ್ರಿಲ್ 2018, 19:30 IST

ನವದೆಹಲಿ: ಎಸ್‌ಸಿ ಎಸ್‌ಟಿ ಕಾಯ್ದೆ ಹಿಂಪಡೆಯಲಾಗಿದೆ ಎಂದು ಸುಳ್ಳು ಹೇಳಿ ಸಮಾಜದಲ್ಲಿ ದ್ವೇಷ ಹುಟ್ಟಿಸುವ ಕೆಲಸವನ್ನು ರಾಹುಲ್‌ ಗಾಂಧಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಆರೋಪಿಸಿದ್ದಾರೆ.

ಒಡಿಶಾ ಪ್ರವಾಸದಲ್ಲಿರುವ ಶಾ, ತಮ್ಮ ಟ್ವಿಟರ್‌ನಲ್ಲಿ ರಾಹುಲ್‌ ಗಾಂಧಿ ಅವರ ಭಾಷಣದ ವಿಡಿಯೊ ಟ್ಯಾಗ್‌ ಮಾಡಿದ್ದಾರೆ. ‘ದಲಿತರು ಮತ್ತು ಆದಿವಾಸಿಗಳ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ. ಎಸ್‌ಸಿ ಎಸ್‌ಟಿ ಕಾಯ್ದೆ ಹಿಂಪಡೆಯಲಾಗುತ್ತದೆ. ಪ್ರಧಾನಿ ಮೋದಿ ಈ ಬಗ್ಗೆ ಒಂದು ಮಾತೂ ಆಡುತ್ತಿಲ್ಲ’ ಎಂದು ಹೇಳಿರುವುದು ವಿಡಿಯೊದಲ್ಲಿದೆ.

‘ಸುಳ್ಳು ಮತ್ತು ಬರೇ ಸುಳ್ಳು !ಕಾಯ್ದೆ ಹಿಂಪಡೆಯಲಾಗುತ್ತದೆ ಎಂದು ಹೇಗೆ ಕತೆ ಹೆಣೆಯುತ್ತಿದ್ದಾರೆ ನೋಡಿ’ ಎಂದು ಶಾ ತಿರುಗೇಟು ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.