ನವದೆಹಲಿ: ದೊಡ್ಡ ಮುಖ ಬೆಲೆಯ ನೋಟು ರದ್ದು ನಿರ್ಧಾರ ಪ್ರಕಟಿಸಿದ ದಿನವಾದ ನವೆಂಬರ್ 8 ಅನ್ನು ಕೇಂದ್ರ ಸರ್ಕಾರ ‘ಕಪ್ಪುಹಣ ವಿರೋಧಿ ದಿನ’ವಾಗಿ ಆಚರಿಸಲಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಘೋಷಿಸಿದ್ದಾರೆ.
ನವೆಂಬರ್ 8 ಅನ್ನು ‘ಕರಾಳ ದಿನ’ ಎಂದು ಆಚರಿಸುವುದಾಗಿ ವಿರೋಧ ಪಕ್ಷಗಳು ಹೇಳಿಕೆ ನೀಡಿದ ಬೆನ್ನಲ್ಲೇ ಜೇಟ್ಲಿ ಈ ಘೋಷಣೆ ಮಾಡಿದ್ದಾರೆ.
ನೋಟು ರದ್ದತಿಯನ್ನು ಸಮರ್ಥಿಸಿಕೊಂಡ ಜೇಟ್ಲಿ, ಇದೊಂದು ಕಪ್ಪುಹಣ ನಿಗ್ರಹ ಕ್ರಮವಾಗಿತ್ತು ಎಂದು ಹೇಳಿದ್ದಾರೆ. ಜತೆಗೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಅರಿವು ಮೂಡಿಸಲು ಕೇಂದ್ರ ಸಚಿವರು ದೇಶದಾದ್ಯಂತ ಸಂಚರಿಸಲಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.
ನವೆಂಬರ್ 8 ಅನ್ನು ವಿರೋಧ ಪಕ್ಷಗಳು ‘ಕರಾಳ ದಿನ’ವನ್ನಾಗಿ ಆಚರಿಸಲಿವೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರು ಮಂಗಳವಾರ ಹೇಳಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.