ADVERTISEMENT

ನಾಪತ್ತೆಯಾದವರು ಮೃತರು: ಘೋಷಣೆ

ಉತ್ತರಾಖಂಡ ದುರಂತ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2013, 19:59 IST
Last Updated 3 ಸೆಪ್ಟೆಂಬರ್ 2013, 19:59 IST

ಡೆಹ್ರಾಡೂನ್: ಉತ್ತರಾಖಂಡ ಪ್ರವಾಹದಲ್ಲಿ ನಾಪತ್ತೆಯಾದ ಸಾವಿರಾರು ಮಂದಿಯನ್ನು  ಅಧಿಕೃತವಾಗಿ ಮೃತಪಟ್ಟಿದ್ದಾರೆಂದು ಘೋಷಿಸಲಾಗುತ್ತದೆ.
ಇದುವರೆಗೆ ಇವರೆಲ್ಲ ಸತ್ತಿದ್ದಾರೆಂದು ಶಂಕಿಸಲಾಗಿತ್ತು. ಆದರೆ ಇವರೆಲ್ಲ ಮೃತಪಟ್ಟಿದ್ದಾಗಿ ಅಧಿಕೃತವಾಗಿ ಘೋಷಿಸಲು ಉತ್ತರಾಖಂಡ ಸರ್ಕಾರ ಸೋಮವಾರ ನಿರ್ಧರಿಸಿದೆ.

ಮೃತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಘೋಷಿಸಿರುವ ಪರಿಹಾರ ಮೊತ್ತ ಇವರಿಗೂ ಸಿಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.