ADVERTISEMENT

ನಾರಾಯಣ ಸಾಯಿ ನ್ಯಾಯಾಂಗ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2014, 19:30 IST
Last Updated 1 ಜನವರಿ 2014, 19:30 IST

ಸೂರತ್‌ (ಪಿಟಿಐ): ಪೊಲೀಸರು ಮತ್ತು ನ್ಯಾಯಾಲಯದ ಸಿಬ್ಬಂದಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇರೆಗೆ ಸ್ವಯಂಘೋಷಿತ ದೇವಮಾನವ ಆಸಾರಾಂ ಬಾಪು ಅವರ ಪುತ್ರ ನಾರಾಯಣ ಸಾಯಿ ಅವರನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ತಮ್ಮ ಮೇಲೆ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಮುಚ್ಚಿ­ಹಾಕಲು ನಾರಾಯಣ ಸಾಯಿ ಅವರು ಸಿಬ್ಬಂದಿಗೆ  ಲಂಚ ನೀಡಲು ಯತ್ನಿಸಿದ್ದರು.
ನಾರಾಯಣ ಸಾಯಿ ವಿಚಾರಣೆ ನಡೆಸಲು ಇನ್ನೂ ನಾಲ್ಕು ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕೆಂದು ಪೊಲೀಸರು ಕೋರಿದ್ದ ಅರ್ಜಿಯನ್ನು ಜಿಲ್ಲಾ ಸೆಷೆನ್ಸ್‌ ಮುಖ್ಯ ನ್ಯಾಯಾಧೀಶ ಐ.ಸಿ. ಷಾ ತಿರಸ್ಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.