ನವದೆಹಲಿ (ಪಿಟಿಐ): ದೇಶದ ಗಮನ ಸೆಳೆದಿರುವ ದೆಹಲಿ, ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸಗಡ ರಾಜ್ಯ ವಿಧಾನಸಭೆಗಳಿಗೆ ನಡೆದ ಚುನಾವಣೆಯ ಮತಎಣಿಕೆ ಕಾರ್ಯ ವ್ಯಾಪಕ ಬಿಗಿ–ಭದ್ರತೆಯ ನಡುವೆ ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಾಲ್ಕನೇ ಬಾರಿಗೆ ಚುಕ್ಕಾಣಿ ಹಿಡಿಯಲು ಅದೃಷ್ಟ ಪರೀಕ್ಷೆ ನಡೆಸುತ್ತಿರುವ ಮುಖ್ಯಮಂತ್ರಿ ಶೀಲಾ ದಿಕ್ಷೀತ್, ಬಿಜೆಪಿಯ ಹರ್ಷವರ್ಧನ ಹಾಗೂ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ಮತ್ತು 800 ಅಧಿಕ ಇತರ ಅಭ್ಯರ್ಥಿಗಳ ‘ಹಣೆಬರಹ’ ಇಂದು ತಿಳಿಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.