ADVERTISEMENT

ನಿರ್ಲಕ್ಷಿಸಿದ್ದೇ ತಪ್ಪು

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2011, 19:30 IST
Last Updated 7 ಸೆಪ್ಟೆಂಬರ್ 2011, 19:30 IST

ನವದೆಹಲಿ (ಪಿಟಿಐ): ಕಳೆದ ನಾಲ್ಕು ತಿಂಗಳ ಹಿಂದೆ ಇದೇ ಸ್ಥಳದಲ್ಲಿ ಸಂಭವಿಸಿದ ಸ್ಫೋಟದ ನಂತರ ಸರ್ಕಾರ ಕ್ರಮ ಕೈಗೊಂಡಿದ್ದರೆ ಈಗ ಮತ್ತೊಂದು ಭೀಕರ ಸ್ಫೋಟ ಸಂಭವಿಸುತ್ತಿರಲಿಲ್ಲ ಎಂದು ಬಿಜೆಪಿ ಆಪಾದಿಸಿದೆ.
ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿರುವ ರಾಮಮನೋಹರ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದ ಲೋಕಸಭೆ ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಹೀಗೆ ಹೇಳಿದರು.

ಮೇ 25ರಂದು ಸ್ಫೋಟ ಸಂಭವಿಸಿದ ನಂತರ ಹೈಕೋರ್ಟ್ ಕಟ್ಟಡದ ಸುತ್ತಮುತ್ತ ಸಿ.ಸಿ ಟಿ.ವಿಗಳನ್ನು ಅಳವಡಿಸಲು ನಿರ್ಧರಿಸಲಾಗಿತ್ತು. ಆದರೆ ಯಾವ ಕ್ರಮವನ್ನೂ ಸರ್ಕಾರ ಕೈಗೊಳ್ಳಲಿಲ್ಲ ಎಂದು ಸುಷ್ಮಾ ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.