ADVERTISEMENT

ನಿಲೇಕಣಿ ಸ್ಪರ್ಧೆ ಸಂಭವ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2013, 19:04 IST
Last Updated 17 ಸೆಪ್ಟೆಂಬರ್ 2013, 19:04 IST

ನವದೆಹಲಿ: ‘ವಿಶಿಷ್ಟ ಗುರುತು ಪ್ರಾಧಿಕಾರ’ದ (ಯುಐಡಿಎಐ)  ಅಧ್ಯಕ್ಷ ನಂದನ್‌ ನಿಲೇಕಣಿ ಅವರನ್ನು ರಾಜಕೀಯಕ್ಕೆ ಎಳೆದು ತರಲು
ಕಾಂಗ್ರೆಸ್‌ ತೀವ್ರವಾಗಿ ಪ್ರಯತ್ನಿಸುತ್ತಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಪ್ರತಿಷ್ಠಿತ ‘ಇನ್ಫೋಸಿಸ್‌’ ಸಂಸ್ಥೆ ಸಂಸ್ಥಾಪಕರಲ್ಲಿ ಒಬ್ಬರಾಗಿರುವ ನಿಲೇಕಣಿ ಅವರನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್‌ ಎದುರು ಕಣಕ್ಕಿಳಿಸುವ ಕುರಿತು ಕಾಂಗ್ರೆಸ್‌ ಗಂಭೀರವಾಗಿ ಪರಿಶೀಲಿಸು ತ್ತಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.