ADVERTISEMENT

ನಿವೃತ್ತ ಲೆ. ಜ. ತೇಜಿಂದರ್ ಸಿಂಗ್‌ವಿಚಾರಣೆ

​ಪ್ರಜಾವಾಣಿ ವಾರ್ತೆ
Published 17 ಮೇ 2012, 19:30 IST
Last Updated 17 ಮೇ 2012, 19:30 IST

ಮುಂಬೈ (ಪಿಟಿಐ): ಆದರ್ಶ ಗೃಹ ನಿರ್ಮಾಣ ಸಂಘದ ಹಗರಣಕ್ಕೆ ಸಂಬಂಧಿಸಿದಂತೆ 14 ಕೋಟಿ ಲಂಚ ನೀಡಲು ಬಂದಿದ್ದರು ಎಂದು ಸೇನಾ ಮುಖ್ಯಸ್ಥ ವಿ. ಕೆ. ಸಿಂಗ್ ಮಾಡಿರುವ ಆಪಾದನೆಗೆ ಸಂಬಂಧಿಸಿದಂತೆ ಸಿಬಿಐ ನಿವೃತ್ತ ಲೆ. ಜ. ತೇಜಿಂದರ್ ಸಿಂಗ್ ಅವರನ್ನು ಪ್ರಶ್ನಿಸಿದೆ.

ವಿವಾದಾತ್ಮಕ ಆದರ್ಶ ಗ್ರಹ ನಿರ್ಮಾಣ ಸಂಘದಲ್ಲಿ ಫ್ಲಾಟ್ ಹೇಗೆ ಮಂಜೂರಾಯಿತು, ಹಣ ಎಲ್ಲಿಂದ ಬಂತು ಮತ್ತು ಇತರ ವಿಚಾರಗಳ ಬಗ್ಗೆ ಪ್ರಶ್ನಿಸಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.