
ಪ್ರಜಾವಾಣಿ ವಾರ್ತೆಚೆನ್ನೈ(ಪಿಟಿಐ): ತಮಿಳುನಾಡು ಹಾಗೂ ಪುದುಚೇರಿಗೆ ಕಾವೇರಿ ನದಿಯಿಂದ ಕರ್ನಾಟಕ ನೀರು ಬಿಡುವಂತೆ ಕೇಂದ್ರ ಸರ್ಕಾರ ಎಲ್ಲ ಪ್ರಯತ್ನಗಳನ್ನು ಕೈಗೊಳ್ಳಲಿದೆ ಎಂದು ಪ್ರಧಾನಿ ಕಚೇರಿ ರಾಜ್ಯ ಸಚಿವ ವಿ.ನಾರಾಯಣ ಸ್ವಾಮಿ ಹೇಳಿದ್ದಾರೆ.
ತಮಿಳುನಾಡಿಗೆ ನೀರು ಬಿಡಲು ಕರ್ನಾಟಕ ನಿರಾಕರಿಸಿದ ನಂತರ ಸುಪ್ರೀಂಕೋರ್ಟ್ನಲ್ಲಿ ತಮಿಳುನಾಡು ನ್ಯಾಯಾಂಗನಿಂದನೆ ಮೊಕದ್ದಮೆ ದಾಖಲಿಸಲು ತೀರ್ಮಾನ ಕೈಗೊಂಡ ಬೆನ್ನಲ್ಲೇ ಸಚಿವರು ಈ ಭರವಸೆ ನೀಡಿದ್ದಾರೆ. ತಮಿಳುನಾಡು ಮತ್ತು ಪುದುಚೇರಿಗಳಿಗೆ ಕರ್ನಾಟಕ ಕಾವೇರಿ ನೀರಿನ ಪಾಲನ್ನು ಬಿಡುವುದು ಕಡ್ಡಾಯ ಹಾಗೂ ಇದು ಕೇಂದ್ರ ಸರ್ಕಾರದ ಉದ್ದೇಶ ಸಹ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.