ಸಂಭಾಲ್ (ಉತ್ತರ ಪ್ರದೇಶ): ‘ಪಕ್ಷ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ’ ಎಂದು ಸಮಾಜವಾದಿ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ಶಿವಪಾಲ್ ಯಾದವ್ ಗುರುವಾರ ಹೇಳಿದ್ದಾರೆ.
‘ಸದ್ಯಕ್ಕೆ ನಾನು ಸಮಾಜವಾದಿ ಪಕ್ಷದಲ್ಲಿ ಯಾವುದೇ ಹುದ್ದೆ ಹೊಂದಿಲ್ಲ. ಆದರೆ ನಾನು ಪಕ್ಷದ ನಿಜವಾದ ಯೋಧ’ ಎಂದು ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಚಿಕ್ಕಪ್ಪನಾದ ಶಿವಪಾಲ್ ಕಾರ್ಯಕ್ರಮವೊಂದರಲ್ಲಿ ಹೇಳಿದರು.
‘ಪಕ್ಷದೊಂದಿಗೆ ನನಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಸಮಾಜವಾದಿ ಪಕ್ಷ ಮತ್ತೊಮ್ಮೆ ಉತ್ತರ ಪ್ರದೇಶದಲ್ಲಿ ಸರ್ಕಾರ ರಚಿಸಲಿದೆ ಹಾಗೂ ಅಖಿಲೇಶ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ’ ಎಂದು ಹೇಳಿದರು.
ಕೌಟುಂಬಿಕ ಕಲಹವನ್ನು ಅಲ್ಲಗಳೆದ ಅವರು, ‘ಎಲ್ಲ ಕುಟುಂಬಗಳಲ್ಲೂ ಭಿನ್ನಾಭಿಪ್ರಾಯ ಇದ್ದೇ ಇರುತ್ತದೆ, ನನ್ನದೂ ಅದರಲ್ಲಿ ಒಂದು’ ಎಂದು ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.