ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತಿ’ ಚಿತ್ರದ ಬಿಡುಗಡೆಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ನಿಷೇಧ ಹೇರಬೇಕು ಎಂದು ಬಿಜೆಪಿ ಮುಖಂಡ ರಾಜ್ ಪುರೋಹಿತ್ ಅವರು ಗುರುವಾರ ಆಗ್ರಹಿಸಿದ್ದಾರೆ. ದೀಪಿಕಾ ಪಡುಕೋಣೆ, ಶಾಹಿದ್ ಕಪೂರ್ ಹಾಗೂ ರಣವೀರ್ ಸಿಂಗ್ ಅಭಿನಯದ ಈ ಚಿತ್ರ ಡಿಸೆಂಬರ್ 1ರಂದು ಬಿಡುಗಡೆಯಾಗಲಿದೆ.
ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ರಾಜಸ್ತಾನದ ಕೆಲ ಸಂಘಟನೆಗಳು ಆರೋಪಿಸಿದ ಕಾರಣ ವಿವಾದ ಸೃಷ್ಟಿಯಾಗಿತ್ತು. ಚಿತ್ರದ ಕತೆಯು ರಜಪೂತ ರಾಣಿ ಪದ್ಮಾವತಿ ಹಾಗೂ ದೆಹಲಿ ಸುಲ್ತಾನ ಅಲ್ಲಾವುದ್ದೀನ್ ಖಿಲ್ಜಿ ಸುತ್ತ ಸುತ್ತುತ್ತದೆ.
ಮತ್ತೊಬ್ಬ ಬಿಜೆಪಿ ಮುಖಂಡ ಮಹಾರಾಷ್ಟ್ರದ ಪ್ರವಾಸೋದ್ಯಮ ಸಚಿವ ಜಯಕುಮಾರ್ ರಾವಲ್ ಅವರು ಚಿತ್ರ ನಿಷೇಧಕ್ಕೆ ಈ ಮೊದಲು ಆಗ್ರಹಿಸಿದ್ದರು. ಸಚಿವ ರಾವಲ್ ಅವರು ’ಪದ್ಮಾವತಿ‘ಯ ಗಂಡ ರಾವಲ್ ರತನ್ ಸಿಂಗ್ ಅವರ ವಂಶಸ್ಥರು ಕೂಡಾ. ಮಹಾರಾಷ್ಟ್ರ ಮುಖ್ಯಮಂತ್ರಿ ಫಡಣವೀಸ್ ಅವರನ್ನು ಭೇಟಿಯಾಗಿದ್ದ ರಾವಲ್, ಇತಿಹಾಸದಲ್ಲಿ ಸತ್ಯ ಘಟನೆಗಳನ್ನು ಹೇಗೆ ತಿರುಚಲಾಗಿದೆ ಎಂದು ವಿವರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.