ನವದೆಹಲಿ: ಮೂಲಸೌಕರ್ಯ ಮತ್ತು ಕೈಗಾರಿಕಾ ಕ್ಷೇತ್ರಗಳ ಬೃಹತ್ ಯೋಜನೆಗಳಿಗೆ ಬೇಗನೇ ಅನುಮತಿ ನೀಡುವ ಉದ್ದೇಶದಿಂದ ಪರಿಸರ ಮತ್ತು ಅರಣ್ಯ ಸಚಿವಾಲಯಗಳಿಗೆ ಕಾಲಮಿತಿ ನಿಗದಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಪರಿಸರ ಹಾಗೂ ವನ್ಯಜೀವಿಗಳಿಗೆ ಧಕ್ಕೆಯಾಗುತ್ತದೆ ಎಂಬ ನೆಪವೊಡ್ಡಿ ಬೃಹತ್ ಕೈಗಾರಿಕೆಗಳಿಗೆ ಅನುಮತಿ ನೀಡಲು ಅನಗತ್ಯ ವಿಳಂಬವಾಗುತ್ತಿದೆ ಎಂಬ ದೂರುಗಳು ಹೂಡಿಕೆದಾರರು ಮತ್ತು ಉದ್ಯಮಿಗಳಿಂದ ಕೇಳಿ ಬಂದಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.