ADVERTISEMENT

ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಇದು ನಾಚಿಕೆಗೇಡಿನ ಕೆಲಸ– ಅಮಿತ್‌ ಶಾ

ಏಜೆನ್ಸೀಸ್
Published 2 ಜೂನ್ 2018, 14:06 IST
Last Updated 2 ಜೂನ್ 2018, 14:06 IST
ಅಮಿತ್ ಶಾ– ಸಾಂದರ್ಭಿಕ ಚಿತ್ರ
ಅಮಿತ್ ಶಾ– ಸಾಂದರ್ಭಿಕ ಚಿತ್ರ   

ನವದೆಹಲಿ: ಬಿಜೆಪಿ ಕಾರ್ಯಕರ್ತ ದುಲಾಲ್‌ ಕುಮಾರ್‌ ಅವರ ಸಾವನ್ನು ಖಂಡಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಅಮಾನವೀಯ ವರ್ತನೆ ಹಾಗೂ ಹಿಂಸಾತ್ಮಕ ಚಟುವಟಿಕೆಗಳು ನಿರಂತರವಾಗಿ ಮುಂದುವರೆದಿವೆ. ಇದು ನಾಚಿಕೆಗೇಡಿನ ಕೆಲಸ ಎಂದು ಕಿಡಿಕಾರಿದ್ದಾರೆ.

ಮೃತ ದುಲಾಲ್‌ ಕುಮಾರ್‌ ಅವರ ಸಾವಿಗೆ ಸಂತಾಪ ಸೂಚಿಸಿದ ಅಮಿತ್‌ ಶಾ, ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಇವರ ಸಾವಿಗೆ ಕಂಬನಿ ಮಿಡಿದಿದ್ದಾರೆ ಆ ದೇವರು ಮನೆಯವರಿಗೆ ಮಗನ ಸಾವನ್ನು ಎದುರಿಸುವ ಶಕ್ತಿ ನೀಡಲಿ. ಓಂ ಶಾಂತಿ..ಶಾಂತಿ..ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.