ADVERTISEMENT

ಪಾಕಿಸ್ತಾನದ 11 ಕೈದಿಗಳ ಬಿಡುಗಡೆ ಮಾಡಿದ ಭಾರತ

ಏಜೆನ್ಸೀಸ್
Published 12 ಜೂನ್ 2017, 11:19 IST
Last Updated 12 ಜೂನ್ 2017, 11:19 IST
ವಾಘಾ ಗಡಿ
ವಾಘಾ ಗಡಿ   

ನವದೆಹಲಿ: ಶಿಕ್ಷೆಯ ಅವಧಿ ಪೂರೈಸಿರುವ 11 ಪಾಕಿಸ್ತಾನಿ ಕೈದಿಗಳನ್ನು ಭಾರತ ಸೋಮವಾರ ಬಿಡುಗಡೆ ಮಾಡಿದೆ. ಅಟ್ಟಾರಿ–ವಾಘಾ ಗಡಿ ಮೂಲಕ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಿಕೊಡಲಾಗಿದೆ.

ಪಾಕಿಸ್ತಾನದ ಸೇನೆ ಗಡಿಯಲ್ಲಿ ಪದೇಪದೆ ಕದನವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿರುವ ಮತ್ತು ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಗೂಢಚಾರ ಎಂಬ ಆರೋಪದಲ್ಲಿ ತನ್ನ ವಶದಲ್ಲಿಟ್ಟುಕೊಂಡಿರುವ ಪಾಕಿಸ್ತಾನ ಅವರಿಗೆ ಮರಣದಂಡನೆ ವಿಧಿಸಿದೆ. ಅಲ್ಲದೆ, ಭಾರತಕ್ಕೆ ಕಳುಹಿಸಿಕೊಡಲು ನಿರಾಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಮುಂದಿನ ತೀರ್ಪು ನೀಡುವವರೆಗೂ ಜಾಧವ್ ಅವರಿಗೆ ಶಿಕ್ಷೆ ಜಾರಿಗೊಳಿಸಬಾರದು ಎಂದು ಅಂತರರಾಷ್ಟ್ರೀಯ ನ್ಯಾಯಾಲಯ ಇತ್ತೀಚೆಗೆ ತೀರ್ಪು ನೀಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.